Link to home pageLanguagesLink to all Bible versions on this site
2
ದುರ್ಮಾರ್ಗತನವನ್ನು ಬೋಧಿಸುವವರ ವಿಷಯದಲ್ಲಿ ಎಚ್ಚರಿಕೆ (ಯೂದ 1-19)
1 ಆದರೆ ಇಸ್ರಾಯೇಲ್ ಜನರೊಂದಿಗೆ [a]ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ [b]ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು [c]ರಹಸ್ಯವಾಗಿ ಒಳಗೆತರುವವರೂ [d]ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ [e]ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. 2 ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. [f]ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. 3 ಅವರು [g]ದ್ರವ್ಯಾಶೆಯುಳ್ಳವರಾಗಿ [h]ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ [i]ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ. 4 ಹೇಗೆಂದರೆ [j]ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ [k]ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ [l]ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. 5 ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ [m]ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ [n]ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು. 6 [o]ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ [p]ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. 7 ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ [q]ಲೋಟನನ್ನು ಕಾಪಾಡಿದನು. 8 ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ [r]ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು. 9 ಕರ್ತನು [s]ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ. 10 ಮುಖ್ಯವಾಗಿ [t]ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು [u]ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. [v]ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು. 11 [w]ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ. 12 [x]ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ [y]ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು. 13 ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. [z]ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು [aa]ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು [bb]ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ. 14 ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, [cc]ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, [dd]ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ. 15 ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ [ee]ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು. 16 ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. [ff]ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು. 17 ಇವರು [gg]ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. [hh]ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. 18 ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ [ii]ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ [jj]ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. 19 ಇಂಥವರು [kk]ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ [ll]ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.

20 ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ [mm]ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ [nn]ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. 21 [oo]ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು. 22 [pp]“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.

<- 2 ಪೇತ್ರನು 12 ಪೇತ್ರನು 3 ->