5 ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು. 6 ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು. 7 ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು, 8 ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ, 9 ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ. 10 ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
11 “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು. 12 ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
13 ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು. 14 ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು. 15 ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,, 16 “ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ. 17 ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.” 18 ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು. 19 ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ; 20 ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು. 21 ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು. 22 ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
23 ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು. 24 ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ, 25 ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ,
36 ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ. 37 ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.
<- ಅಪೊಸ್ತಲರ ಕೃತ್ಯಗಳು 3ಅಪೊಸ್ತಲರ ಕೃತ್ಯಗಳು 5 ->