1 ಈ ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರಾವಸ್ಥೆಯನ್ನು ಕಂಡೆನು. 2 ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.
3 ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು. 4 ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ.[a]
5 ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು. 6 ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.
12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?
<- ಪ್ರಸಂಗಿ 5ಪ್ರಸಂಗಿ 7 ->- a ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ. ಅಥವಾ ಅವನ ಹೆಸರು ಮರೆತುಹೋಗಲ್ಪಡುತ್ತದೆ.