7 ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ, 8 ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. 9 ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು. 10 ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
11 [b]“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. 12 ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ. 13 ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ. 14 ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. 15 ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. 16 ಇದಲ್ಲದೆ[c]ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ[d]ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು. 17 [e]ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ. 18 ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು.
19 ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಪುನಃ ಬೇಧ ಉಂಟಾಯಿತು. 20 ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು. 21 ಇನ್ನು ಕೆಲವರು, “ಇವು ದೆವ್ವಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.
31 ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು, 32 ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ, 33 ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು. 34 ಅದಕ್ಕೆ ಯೇಸು, [h]“ ‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ? 35 ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ 36 ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’ 37 ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ 38 ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು. 39 [i]ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.
40 ಆ ಮೇಲೆ ಆತನು ಯೊರ್ದನ್ ಹೊಳೆಯನ್ನು ದಾಟಿ, ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಹೋಗಿ ಅಲ್ಲಿ ಉಳಿದು ಕೊಂಡನು. 41 ಆಗ ಅನೇಕರು ಆತನ ಬಳಿಗೆ ಬಂದು, “ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ, ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ಸತ್ಯವಾಗಿದೆ” ಎಂದು ಮಾತನಾಡುತ್ತಿದ್ದರು. 42 ಅಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.
<- ಯೋಹಾನನು 9ಯೋಹಾನನು 11 ->