Link to home pageLanguagesLink to all Bible versions on this site
6
ಏಳು ಮುದ್ರೆಗಳು

1 ಕುರಿಮರಿಯಾದಾತನು [a]ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು [b]ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು [c]ಗುಡುಗಿನಂತಿದ್ದ ಸ್ವರದಿಂದ [d]“ಬಾ!” ಎಂದು ಹೇಳುವುದನ್ನು ಕೇಳಿದೆನು. 2 ನಾನು ನೋಡಲು ಇಗೋ [e]ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು [f]ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು [g]ಕಿರೀಟವು ಕೊಡಲ್ಪಟ್ಟಿತು. ಅವನು [h]ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.

3 ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. 4 ಆಗ [i]ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ [j]ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.

5 ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ [k]ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು. 6 ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. [l]ಒಂದು [m]“ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು.

7 ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು “ಬಾ”! ಎನ್ನುವ ಶಬ್ದವನ್ನು ಕೇಳಿದೆನು. 8 ಆಗ ನಾನು ನೋಡಲು ಇಗೋ, 6:8 ನಸು ಹಸಿರು ಹಾಗು ಬೂದಿ ಮಿಶ್ರಿತ ಬಣ್ಣವನ್ನು ಹೆಣ ಅಥವಾ ಶವಗಳ ಬಣ್ಣವೆಂದು ಸ್ಪಷ್ಟವಾಗಿ ಪರಿಗಣಿಸಲಾಗಿದೆ.
ಜೆಕ. 6:2.
ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು [o]ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.

9 ಆತನು ಐದನೆಯ ಮುದ್ರೆಯನ್ನು ಒಡೆದಾಗ, [p]ದೇವರ ವಾಕ್ಯದ ನಿಮಿತ್ತವಾಗಿಯೂ, [q]ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, [r]ಹತರಾದವರ ಆತ್ಮಗಳು [s]ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು. 10 ಅವರು, “ಸರ್ವಶಕ್ತನಾದ ಕರ್ತನೇ, [t]ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ [u]ಭೂಲೋಕ ನಿವಾಸಿಗಳಿಗೆ ನೀನು [v]ಇನ್ನೆಷ್ಟು ಸಮಯ [w]ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು. 11 ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು [x]ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು [y]ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ [z]ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.

12 ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ [aa]ಮಹಾಭೂಕಂಪ ಉಂಟಾಯಿತು. [bb]ಸೂರ್ಯನು [cc]ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು. 13 [dd]ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ [ee]ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು. 14 ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು [ff]ಮರೆಯಾಯಿತು. [gg]ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು. 15 ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ [hh]ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು. 16 [ii]ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, [jj]ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ. 17 ಏಕೆಂದರೆ ಅವರ [kk]ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, [ll]ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.

<- ಪ್ರಕಟಣೆ 5ಪ್ರಕಟಣೆ 7 ->