3 ದಾವೀದನು ಯೆಹೋವ ದೇವರ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತೆಗೆದುಕೊಂಡು ಬರುವ ನಿಮಿತ್ತ, ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲರನ್ನು ಕೂಡಿಸಿ ಬರಮಾಡಿದನು.
16 ಇದಲ್ಲದೆ ದಾವೀದನು ವಾದ್ಯಗಳನ್ನೂ ವಿಶೇಷವಾದ ವೀಣೆಗಳನ್ನೂ, ಕಿನ್ನರಿಗಳನ್ನೂ, ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನೂ ಎತ್ತುವ ಹಾಗೆ, ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವುದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
17 ಹಾಗೆಯೇ ಲೇವಿಯರು ಯೋಯೇಲನ ಮಗನಾದ ಹೇಮಾನನನ್ನೂ, ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ, ಮೆರಾರೀಯ ಪುತ್ರರ ಸಂಬಂಧಿಕರಲ್ಲಿ ಕೂಷಾಯನ ಮಗ ಏತಾನನನ್ನೂ ನೇಮಿಸಿದರು. 18 ಅವರ ಸಂಗಡ ಎರಡನೆಯ ದರ್ಜೆಯವರಾದ ತಮ್ಮ ಸಹೋದರರಾಗಿರುವ ಜೆಕರ್ಯನನ್ನೂ ಬೇನನನ್ನೂ ಯಾಜೀಯೇಲನನ್ನೂ, ಶೆಮೀರಾಮೋತನನ್ನೂ ಯೆಹೀಯೇಲನನ್ನೂ, ಉನ್ನೀಯನ್ನೂ, ಎಲೀಯಾಬನನ್ನೂ, ಬೆನಾಯನನ್ನೂ, ಮಾಸೇಯನನ್ನೂ, ಮತ್ತಿತ್ಯನನ್ನೂ, ಎಲೀಫೆಲೇಹುನನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಓಬೇದ್ ಏದೋಮನನ್ನೂ ಯೆಹೀಯೇಲನನ್ನೂ ನೇಮಿಸಿದರು.
19 ಸಂಗೀತಗಾರರಾದ ಹೇಮಾನನೂ, ಆಸಾಫನೂ, ಏತಾನನೂ ಕಂಚಿನ ತಾಳಗಳನ್ನು ಬಾರಿಸುವವರು. 20 ಜೆಕರ್ಯ, ಅಜಿಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ, ಬೆನಾಯ ಎಂಬವರನ್ನು ಅಲಮೋತ್ ಎಂಬ ತಾರಸ್ಥಾಯಿಯ ವೀಣೆಗಳನ್ನು ಬಾರಿಸುವುದಕ್ಕೆ ಆರಿಸಿಕೊಂಡರು. 21 ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದ್ ಏದೋಮ್, ಯೆಹೀಯೇಲ್, ಅಜಜ್ಯ ಎಂಬವರನ್ನು ಶೆಮಿನಿಥ್ ಎಂಬ ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸುವುದಕ್ಕೂ ನೇಮಿಸಿಕೊಂಡರು. 22 ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡುವುದಕ್ಕೆ ನೇಮಕವಾದನು. ಅವನು ಸಂಗೀತದಲ್ಲಿ ನಿಪುಣನಾದ್ದರಿಂದ ಅವನು ಮುಖ್ಯಸ್ಥನಾಗಿದ್ದನು.
23 ಬೆರೆಕ್ಯ, ಎಲ್ಕಾನಾ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು. 24 ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೆಯೇಲ್, ಅಮಾಸೈಯೂ, ಜೆಕರ್ಯನೂ, ಬೆನಾಯನೂ, ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು. ಓಬೇದ್ ಏದೋಮನೂ, ಯೆಹೀಯನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.
25 ಹೀಗೆಯೇ ದಾವೀದನೂ, ಇಸ್ರಾಯೇಲಿನ ಹಿರಿಯರೂ, ಸಹಸ್ರಾಧಿಪತಿಗಳೂ ಸಂತೋಷವಾಗಿ ಓಬೇದ್ ಏದೋಮನ ಮನೆಯೊಳಗಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು. 26 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದ್ದರಿಂದ, ಅವರು ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು. 27 ದಾವೀದನೂ, ಮಂಜೂಷವನ್ನು ಹೊರುವ ಲೇವಿಯರೂ, ಹಾಡುಗಾರರೂ, ಸಂಗೀತಗಾರರ ನಾಯಕನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡಿದ್ದನು. 28 ಹೀಗೆ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಆರ್ಭಟದಿಂದಲೂ, ಕೊಂಬಿನ ಶಬ್ದದಿಂದಲೂ, ತುತೂರಿಗಳಿಂದಲೂ, ತಾಳಗಳಿಂದಲೂ ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಾ ತೆಗೆದುಕೊಂಡು ಬಂದರು.
29 ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಕುಣಿಯುತ್ತಾ, ಹಾಡುತ್ತಾ ಇರುವ ಅರಸನಾದ ದಾವೀದನನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು.
<- 1 ಪೂರ್ವಕಾಲ ವೃತ್ತಾಂತ 141 ಪೂರ್ವಕಾಲ ವೃತ್ತಾಂತ 16 ->