1 ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಅರಮನೆಗೆ ತಿರುಗಿಬಂದನು. 2 ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ. 3 ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.
8 ಅವರು ಯೆರೂಸಲೇಮಿಗೆ ತಿರುಗಿ ಬಂದ ತರುವಾಯ ಯೆಹೋಷಾಫಾಟನು ಯೆಹೋವ ದೇವರ ನ್ಯಾಯತೀರ್ವಿಕೆಗೋಸ್ಕರವೂ, ವ್ಯಾಜ್ಯಗಳಿಗೋಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ, ಯಾಜಕರಲ್ಲಿಯೂ, ಇಸ್ರಾಯೇಲ್ ಗೋತ್ರಪ್ರಧಾನರಲ್ಲಿಯೂ ಕೆಲವರನ್ನು ನೇಮಿಸಿ ಅವರಿಗೆ, 9 “ನೀವು ಈ ಕಾರ್ಯವನ್ನು ಯೆಹೋವ ದೇವರ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣಹೃದಯದಿಂದಲೂ ಮಾಡಬೇಕು. 10 ಇದಲ್ಲದೆ ಜೀವಹತ್ಯ, ನ್ಯಾಯಕ್ಕೂ, ಆಜ್ಞೆಗೂ, ನಿಯಮಗಳಿಗೂ, ನ್ಯಾಯತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ, ರೌದ್ರವು ನಿಮ್ಮ ಮೇಲೆಯೂ, ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ. ಆಗ ನೀವು ಅಪರಾಧವಿಲ್ಲದವರಾಗಿರುವಿರಿ.
11 “ಮುಖ್ಯಯಾಜಕನಾದ ಅಮರ್ಯನು ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಯೆಹೂದದ ಮನೆಯ ನಾಯಕನಾಗಿರುವ ಇಷ್ಮಾಯೇಲನ ಮಗ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇರುವರು. ಇದಲ್ಲದೆ ಲೇವಿಯರು ನಿಮ್ಮ ಮುಂದೆ ಅಧಿಕಾರಿಗಳಾಗಿರುವರು. ನೀವು ಬಲಗೊಂಡು ಕೆಲಸ ನಡೆಸಿರಿ. ಯೆಹೋವ ದೇವರು ಒಳ್ಳೆಯವರ ಸಂಗಡ ಇರುವರು,” ಎಂದನು.
<- 2 ಪೂರ್ವಕಾಲ ವೃತ್ತಾಂತ 182 ಪೂರ್ವಕಾಲ ವೃತ್ತಾಂತ 20 ->