5 ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು.
9 ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ. 10 ಈಗ ನಿಮಗೆ ದಾಸರೂ, ದಾಸಿಯರೂ ಆಗಿರುವ ಹಾಗೆ ಯೆಹೂದದ ಮತ್ತು ಯೆರೂಸಲೇಮಿನ ಮಕ್ಕಳನ್ನು ನಿಮ್ಮ ವಶಮಾಡಬೇಕೆಂದು ಇದ್ದೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧಗಳು ಇಲ್ಲವೋ? 11 ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.
12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯನೂ, ಮೆಷಿಲ್ಲೇಮೋತನ ಮಗ ಬೆರೆಕ್ಯನೂ, ಶಲ್ಲೂಮನ ಮಗ ಹಿಜ್ಕೀಯನೂ, ಹದ್ಲೈಯನ ಮಗ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧವಾಗಿ ಎದ್ದು 13 ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.
14 ಆಗ ಸೈನ್ಯದವರು ಸೆರೆಯವರನ್ನೂ, ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ, ಸಮಸ್ತ ಕೂಟದ ಮುಂದೆಯೂ ಬಿಟ್ಟುಬಿಟ್ಟರು. 15 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.
16 ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು. 17 ಏಕೆಂದರೆ ಎದೋಮ್ಯರು ತಿರುಗಿಬಂದು ಯೆಹೂದದವರನ್ನು ಸಂಹರಿಸಿ, ಕೆಲವರನ್ನು ಸೆರೆಯಾಗಿ ತೆಗೆದುಕೊಂಡು ಹೋದರು. 18 ಇದಲ್ಲದೆ ಫಿಲಿಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ, ಯೆಹೂದದ ದಕ್ಷಿಣ ಪ್ರಾಂತದಲ್ಲಿಯೂ ನುಗ್ಗಿ, ಬೇತ್ ಷೆಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ ಅದರ ಗ್ರಾಮಗಳನ್ನೂ, ತಿಮ್ನಾ ಅದರ ಗ್ರಾಮಗಳನ್ನೂ, ಗಿಮ್ಜೋ ಅದರ ಗ್ರಾಮಗಳನ್ನೂ ತೆಗೆದುಕೊಂಡು ಅಲ್ಲಿ ವಾಸವಾಗಿದ್ದರು. 19 ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು. 20 ಆಗ ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಬಾಧೆಪಡಿಸಿದನು. 21 ಆಹಾಜನು ಯೆಹೋವ ದೇವರ ಆಲಯದಿಂದಲೂ, ಅರಮನೆಯಿಂದಲೂ, ಪ್ರಧಾನರಿಂದಲೂ ಆಸ್ತಿಯ ಒಂದು ಪಾಲನ್ನು ತೆಗೆದುಕೊಂಡು, ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕೊಟ್ಟನು, ಆದರೂ ಅವನು ಆಹಾಜನಿಗೆ ಸಹಾಯ ಮಾಡಲಿಲ್ಲ.
22 ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು. 23 ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.
24 ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು. 25 ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.
26 ಅವನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳೂ, ಅವನ ಸಕಲ ಮಾರ್ಗಗಳೂ, ಮೊದಲನೆಯವುಗಳೂ, ಕಡೆಯವುಗಳೂ ಯೆಹೂದದ ಮತ್ತು ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. 27 ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.
<- 2 ಪೂರ್ವಕಾಲ ವೃತ್ತಾಂತ 272 ಪೂರ್ವಕಾಲ ವೃತ್ತಾಂತ 29 ->