2 ಅವನು ತಮ್ಮೊಂದಿಗೆ ಹೀಬ್ರೂ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿದಾಗ ಅವರು ಮತ್ತಷ್ಟು ನಿಶ್ಶಬ್ದರಾದರು.
6 “ಸುಮಾರು ಮಧ್ಯಾಹ್ನದ ಸಮಯಕ್ಕೆ ನಾನು ದಮಸ್ಕದ ಹತ್ತಿರದಲ್ಲಿದ್ದೆನು. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾ ಬೆಳಕು ನನ್ನ ಸುತ್ತಲೂ ಹೊಳೆಯಿತು. 7 ನಾನು ನೆಲದ ಮೇಲೆ ಬಿದ್ದೆನು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?’ ಎಂದು ಒಂದು ಸ್ವರವು ನನಗೆ ಹೇಳುವುದನ್ನು ಕೇಳಿಸಿಕೊಂಡೆನು.
8 “ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು,
10 “ಆಗ ನಾನು, ‘ಸ್ವಾಮಿ, ನಾನೇನು ಮಾಡಬೇಕು?’ ಎಂದು ಕೇಳಲು,
12 “ಅನನೀಯ ಎಂಬ ಹೆಸರಿನವನೊಬ್ಬನು ನನ್ನ ಬಳಿ ಬಂದನು. ಅವನು ಮೋಶೆಯ ನಿಯಮಕ್ಕನುಗುಣವಾಗಿ ಭಕ್ತಿವಂತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಸಾಕ್ಷಿಹೊಂದಿದವನೂ ಆಗಿದ್ದನು. 13 ಅವನು ನನ್ನ ಬಳಿ ನಿಂತುಕೊಂಡು, ‘ಸಹೋದರ ಸೌಲನೇ, ನೀನು ದೃಷ್ಟಿಯನ್ನು ಪಡೆದುಕೋ,’ ಎಂದನು. ಆ ಗಳಿಗೆಯಲ್ಲಿಯೇ ನಾನು ದೃಷ್ಟಿಯನ್ನು ಪಡೆದು ಅವನನ್ನು ಕಂಡೆನು.
14 “ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ. 15 ಏಕೆಂದರೆ ನೀನು ಕಂಡದ್ದಕ್ಕೂ ಕೇಳಿದ್ದಕ್ಕೂ ಎಲ್ಲಾ ಜನರಿಗೆ ಅವರ ಸಾಕ್ಷಿಯಾಗಿರುವೆ. 16 ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು.
17 “ನಾನು ಯೆರೂಸಲೇಮಿಗೆ ಹಿಂದಿರುಗಿ ಬಂದು ದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಆತ್ಮಪರವಶನಾದೆನು. 18 ಆಗ ಕರ್ತ ಯೇಸು ನನ್ನೊಂದಿಗೆ ಮಾತನಾಡುತ್ತಿರುವುದನ್ನು ಕಂಡೆನು. ಅವರು, ‘ತಡಮಾಡದೆ! ತಕ್ಷಣವೇ ಯೆರೂಸಲೇಮನ್ನು ಬಿಟ್ಟು ಹೊರಟು ಹೋಗು, ಏಕೆಂದರೆ ನೀನು ನನ್ನನ್ನು ಕುರಿತು ಹೇಳುವ ಸಾಕ್ಷಿಯನ್ನು ಅವರು ಸ್ವೀಕರಿಸುವುದಿಲ್ಲ,’ ಎಂದರು.
19 “ಅದಕ್ಕೆ ನಾನು, ‘ಸ್ವಾಮಿ, ಎಲ್ಲಾ ಸಭಾಮಂದಿರಗಳಲ್ಲಿಯೂ ನಿಮ್ಮಲ್ಲಿ ನಂಬಿಕೆಯಿಟ್ಟವರನ್ನು ಬಂಧಿಸಿ, ಹೊಡೆದು ಸೆರೆಮನೆಗೆ ಹಾಕಿಸುತ್ತಿದ್ದೇನೆಂದು ಈ ಜನರು ಬಲ್ಲರು. 20 ನಿಮ್ಮ ಸಾಕ್ಷಿಯಾದ ಸ್ತೆಫನನ ರಕ್ತ ಸುರಿಸಿದಾಗ ಅದಕ್ಕೆ ನಾನೂ ಸಮ್ಮತಿ ಕೊಟ್ಟು ಅವನನ್ನು ಕೊಲ್ಲುವವರ ಬಟ್ಟೆಗಳನ್ನು ಕಾಯುತ್ತಾ ನಿಂತಿದ್ದೆನು,’ ಎಂದೆನು.
21 “ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.”
23 ಅವರು ಅರಚುತ್ತ ತಮ್ಮ ಮೇಲಂಗಿಗಳನ್ನು ಹರಿಯುತ್ತ ಗಾಳಿಯಲ್ಲಿ ಮಣ್ಣು ತೂರುತ್ತಿರಲು, 24 ಸಹಸ್ರಾಧಿಪತಿಯು ಪೌಲನನ್ನು ಸೈನಿಕರ ಪಾಳ್ಯದೊಳಗೆ ಒಯ್ಯಬೇಕೆಂದು, ಅವನನ್ನು ಕೊರಡೆಗಳಿಂದ ಹೊಡೆದು ಯಾವ ಅಪರಾಧಕ್ಕಾಗಿ ಜನರು ಅವನಿಗೆ ವಿರೋಧವಾಗಿ ಅರಚುತ್ತಿದ್ದರು ಎಂಬುದನ್ನು ಅವನಿಂದ ವಿಚಾರಿಸಬೇಕೆಂದು ಆಜ್ಞಾಪಿಸಿದನು. 25 ಆದರೆ ಅವರು ಅವನನ್ನು ಹೊಡೆಯುವುದಕ್ಕೆ ಬಾರುಕೋಲನ್ನು ಚಾಚಿದಾಗ ಪೌಲನು ಅಲ್ಲಿ ನಿಂತಿದ್ದ ಶತಾಧಿಪತಿಗೆ, “ಅಪರಾಧಿಯೆಂದು ಸಿದ್ಧವಾಗುವ ಮೊದಲೇ ರೋಮ್ ಪೌರನನ್ನು ಕೊರಡೆಗಳಿಂದ ಹೊಡೆಯುವುದು ನ್ಯಾಯವಾದದ್ದೋ?” ಎಂದು ಕೇಳಿದನು.
26 ಶತಾಧಿಪತಿ ಈ ಮಾತುಗಳನ್ನು ಕೇಳಿದಾಗ, ಸಹಸ್ರಾಧಿಪತಿಯ ಬಳಿಗೆ ಹೋಗಿ ಇದನ್ನು ವರದಿ ಮಾಡಿ, “ಇವನು ರೋಮ್ ಪೌರನು. ಈಗ ನೀನೇನು ಮಾಡಬೇಕೆಂದಿದ್ದೀ?” ಎಂದು ಅವನನ್ನು ಪ್ರಶ್ನಿಸಿದನು.
27 ಸಹಸ್ರಾಧಿಪತಿಯು ಪೌಲನ ಬಳಿಗೆ ಹೋಗಿ, “ನೀನು ರೋಮ್ ಪೌರನೋ, ಹೇಳು?” ಎಂದು ಕೇಳಿದ್ದಕ್ಕೆ,
28 “ನಾನು ಈ ಪೌರತ್ವ ಪಡೆಯಬೇಕಾದರೆ ಅದಕ್ಕೆ ನಾನು ಬಹಳ ಹಣ ಕೊಡಬೇಕಾಯಿತು,” ಎಂದು ಸಹಸ್ರಾಧಿಪತಿಯು ಹೇಳಲು, ಪೌಲನು,
29 ಪೌಲನನ್ನು ಪ್ರಶ್ನಿಸಲು ಬಂದವರು ತಕ್ಷಣವೇ ಬಿಟ್ಟುಹೋದರು. ಮಾತ್ರವಲ್ಲದೆ ಪೌಲನು ರೋಮ್ ಪೌರನೆಂದು ಗ್ರಹಿಸಿದ ಅವನನ್ನು ಬೇಡಿಗಳಿಂದ ಬಂಧಿಸಿದ್ದರಿಂದ ಸಹಸ್ರಾಧಿಪತಿಯೂ ಭಯಪಟ್ಟನು.