7 ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
8 ನಾನು ಅದನ್ನು ಕೇಳಿದೆನು, ಆದರೆ ಗ್ರಹಿಸಲಿಲ್ಲ. ಆಗ ನಾನು, “ನನ್ನ ಒಡೆಯನೇ, ಈ ಸಂಗತಿಗಳ ಅಂತ್ಯವೇನು?” ಎಂದು ಕೇಳಿದೆನು.
9 ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ. 10 ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.
11 “ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು. 12 1,335 ದಿನಗಳು ಬರುವವರೆಗೆ ಕಾದಿರುವವನೇ ಭಾಗ್ಯವಂತನು.
13 “ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು.
<- ದಾನಿಯೇಲ 11