2 ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲಾಂತರದವರೆಗೂ ಯೆಹೋವ ದೇವರ ಸಭೆಗೆ ಸೇರಬಾರದು.
3 ಅಮ್ಮೋನಿಯರು ಇಲ್ಲವೆ ಮೋವಾಬ್ಯರು ಯೆಹೋವ ದೇವರ ಸಭೆಗೆ ಸೇರಬಾರದು; ಹತ್ತನೆಯ ತಲಾಂತರವರೆಗೆ ಅವರು ಯೆಹೋವ ದೇವರ ಸಭೆಯಲ್ಲಿ ಸೇರಬಾರದು. 4 ಏಕೆಂದರೆ ನೀವು ಈಜಿಪ್ಟನ್ನು ಬಿಟ್ಟು ಬರುವಾಗ, ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವುದಕ್ಕೆ ಎದುರುಗೊಳ್ಳಲಿಲ್ಲ. ನಿಮ್ಮನ್ನು ಶಪಿಸುವುದಕ್ಕೆ ಮೆಸೊಪೊತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ಬಿಳಾಮನಿಗೆ ಕೂಲಿ ಕೊಟ್ಟು ನಿಮಗೆ ವಿರೋಧವಾಗಿ ಕರೆಸಿದರು. 5 ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸಲಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು. 6 ನೀವು ಇರುವವರೆಗೆ ಎಂದಿಗೂ ಅವರ ಏಳಿಗೆಯನ್ನು, ಕ್ಷೇಮವನ್ನು ಬಯಸಬಾರದು.
7 ಎದೋಮ್ಯನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನು ನಿಮ್ಮ ಸಹೋದರನು; ಈಜಿಪ್ಟಿನವನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನ ದೇಶದಲ್ಲಿ ನೀವು ಪರವಾಸಿಯಾಗಿದ್ದಿರಿ. 8 ಅವರಿಗೆ ಹುಟ್ಟುವ ಮಕ್ಕಳಲ್ಲಿ ಮೂರನೆಯ ತಲಾಂತರದವರು ಯೆಹೋವ ದೇವರ ಸಭೆಯಲ್ಲಿ ಸೇರಬಹುದು.
12 ಇದಲ್ಲದೆ ನೀವು ಮಲವಿಸರ್ಜನೆಗೆ ಹೋಗಲು ಪಾಳೆಯದ ಹೊರಗೆ ಸ್ಥಳವಿರಬೇಕು. 13 ನಿಮ್ಮ ಆಯುಧಗಳ ಜೊತೆಯಲ್ಲಿ ಕಬ್ಬಿಣದ ಸಲಕೆ ಇರಬೇಕು. ನೀವು ಮಲವಿಸರ್ಜನೆ ಮಾಡಿದಾಗ, ಆ ಸಲಕೆಯಿಂದ ಅಗೆದು ಮುಚ್ಚಿಬಿಡಬೇಕು. 14 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಕ್ಷಿಸುವುದಕ್ಕೂ, ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವುದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾರೆ. ಅವರು ನಿಮ್ಮಲ್ಲಿ ಅಶುದ್ಧವಾದ ಕಾರ್ಯವನ್ನು ನೋಡಿ, ನಿಮ್ಮನ್ನು ಬಿಟ್ಟು ತಿರುಗಿಹೋಗದಂತೆ ನಿಮ್ಮ ಪಾಳೆಯವು ನಿರ್ಮಲವಾಗಿರಬೇಕು.
17 ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ಗುಡಿ ವೇಶ್ಯೆಯಾಗಬಾರದು. ಇಸ್ರಾಯೇಲರಲ್ಲಿ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು. 18 ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯು ಸೂಳೆಗಾರಿಕೆಯಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ದೇವ ಮಂದಿರದೊಳಗೆ ತರಬಾರದು. ಏಕೆಂದರೆ ಅವೆರಡನ್ನು ನಿನ್ನ ದೇವರಾದ ಯೆಹೋವ ದೇವರು ದ್ವೇಷಿಸುತ್ತಾರೆ.
19 ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವನ್ನಾಗಲಿ, ಬೇರೆ ಯಾವುದನ್ನಾಗಲಿ ಬಡ್ಡಿಗೆ ಕೊಡಬಾರದು. 20 ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸಹೋದರನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೆಲಸಗಳನ್ನು ಆಶೀರ್ವದಿಸುತ್ತಾರೆ.
21 ನೀನು ನಿನ್ನ ದೇವರಾದ ಯೆಹೋವ ದೇವರಿಗೆ ಹರಕೆಮಾಡಿದ ಮೇಲೆ ಅದನ್ನು ಸಲ್ಲಿಸುವುದಕ್ಕೆ ತಡಮಾಡಬೇಡ. ಏಕೆಂದರೆ ನಿನ್ನ ದೇವರಾದ ಯೆಹೋವ ದೇವರು ಅದನ್ನು ನಿಶ್ಚಯವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವರು. ತೀರಿಸದೆ ಹೋಗುವದು ಪಾಪ. 22 ಆದರೆ ನೀನು ಹರಕೆ ಮಾಡದಿದ್ದರೆ, ನೀನು ದೋಷಿಯಾಗುವುದಿಲ್ಲ. 23 ನಿನ್ನ ತುಟಿಗಳಿಂದ ಹೊರಟಿದ್ದನ್ನು ಮಾಡುವುದಕ್ಕೆ ತಪ್ಪಬೇಡ. ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಬಾಯಿಯಿಂದಲೇ ನೀನು ಹರಕೆ ಮಾಡಿದಿಯಲ್ಲವೇ.
24 ನಿನ್ನ ನೆರೆಯವನ ದ್ರಾಕ್ಷಿ ತೋಟಕ್ಕೆ ಬಂದರೆ, ನಿನ್ನ ಮನಸ್ಸು ತೃಪ್ತಿಯಾಗುವವರೆಗೆ ಹಣ್ಣುಗಳನ್ನು ತಿನ್ನಬಹುದು. ಆದರೆ ನಿನ್ನ ಚೀಲದಲ್ಲಿ ಹಾಕಿಕೊಳ್ಳಬಾರದು. 25 ನಿನ್ನ ನೆರೆಯವನ ಪೈರಿನ ಬಳಿಗೆ ಹಾದುಹೋಗುವಾಗ, ಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲು ಹಾಕಿ ಕೊಯ್ಯಬಾರದು.
<- ಧರ್ಮೋಪದೇಶಕಾಂಡ 22ಧರ್ಮೋಪದೇಶಕಾಂಡ 24 ->