4 ಆಗ ಪಿಲಾತನು ತಿರುಗಿ ಹೊರಗೆ ಹೋಗಿ ಯೆಹೂದ್ಯರ ಗುಂಪಿಗೆ, “ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವಂತೆ ಆತನನ್ನು ನಿಮ್ಮ ಬಳಿಗೆ ತರುತ್ತೇನೆ,” ಎಂದನು. 5 ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವರಾಗಿ ಹೊರಗೆ ಬಂದರು. ಪಿಲಾತನು ಅವರಿಗೆ, “ಇಗೋ, ಆ ಮನುಷ್ಯನು ಇವನೇ!” ಎಂದನು.
6 ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು.
7 ಯೆಹೂದ್ಯ ನಾಯಕರು ಅವನಿಗೆ, “ನಮಗೆ ಒಂದು ನಿಯಮವಿದೆ, ಆ ನಿಯಮದ ಪ್ರಕಾರ ಅವನು ಸಾಯಲೇಬೇಕು. ಏಕೆಂದರೆ ಅವನು ತನ್ನನ್ನು ದೇವರ ಪುತ್ರನನ್ನಾಗಿ ಮಾಡಿಕೊಂಡಿದ್ದಾನೆ,” ಎಂದರು.
8 ಪಿಲಾತನು ಈ ಮಾತನ್ನು ಕೇಳಿದಾಗ ಬಹಳವಾಗಿ ಭಯಪಟ್ಟನು. 9 ತಿರುಗಿ ತನ್ನ ನಿವಾಸದೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರ ಕೊಡಲಿಲ್ಲ. 10 ಆಗ ಪಿಲಾತನು ಯೇಸುವಿಗೆ, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವುದಕ್ಕೂ ನಿನ್ನನ್ನು ಶಿಲುಬೆಗೆ ಹಾಕಿಸುವುದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯದೋ?” ಎಂದು ಕೇಳಿದನು.
11 ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.
12 ಇದನ್ನು ಕೇಳಿದಾಗಿಂದ ಪಿಲಾತನು ಯೇಸುವನ್ನು ಬಿಡಿಸಲು ಪ್ರಯತ್ನಿಸಿದನು. ಆದರೆ ಯೆಹೂದ್ಯ ನಾಯಕರು, “ನೀನು ಈ ಮನುಷ್ಯನನ್ನು ಬಿಡುಗಡೆ ಮಾಡಿದರೆ, ನೀನು ಕೈಸರನ ಮಿತ್ರನಲ್ಲ. ತನ್ನನ್ನು ತಾನೇ ಅರಸನನ್ನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧವಾಗಿ ಮಾತನಾಡುವವನಾಗಿದ್ದಾನೆ,” ಎಂದು ಕೂಗಿ ಹೇಳಿದರು.
13 ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು. 14 ಅದು ಪಸ್ಕಹಬ್ಬಕ್ಕೆ ಸಿದ್ಧಮಾಡುವ ದಿನದ ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಯಾಗಿತ್ತು.
15 ಆದರೆ ಅವರು, “ಆತನನ್ನು ಕೊಲ್ಲಿಸು ಕೊಲ್ಲಿಸು! ಆತನನ್ನು ಶಿಲುಬೆಗೆ ಹಾಕು!” ಎಂದು ಕೂಗಿದರು.
16 ಆಗ ಪಿಲಾತನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕಾಗಿ ಅವರಿಗೆ ಒಪ್ಪಿಸಿದನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಹೋದರು.
19 ಪಿಲಾತನು ಒಂದು ಫಲಕದ ಮೇಲೆ ಶಿರೋನಾಮವನ್ನು ಬರೆಸಿ, ಅದನ್ನು ಶಿಲುಬೆಯ ಮೇಲಿಟ್ಟಿದ್ದನು. ಅದೇನಂದರೆ:
22 ಪಿಲಾತನು, “ನಾನು ಬರೆದದ್ದು ಬರೆದಾಯಿತು,” ಎಂದು ಉತ್ತರಕೊಟ್ಟನು.
23 ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಹಂಚಿಕೊಂಡರು. ಅವರ ಒಳ ಅಂಗಿಯನ್ನು ಸಹ ತೆಗೆದುಕೊಂಡರು. ಆ ಒಳ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.
24 ಆದ್ದರಿಂದ ಅವರು, “ನಾವು ಅದನ್ನು ಹರಿಯುವುದು ಬೇಡ. ಆದರೆ ಅದು ಯಾರಿಗಾಗುವುದೋ ಎಂದು ನೋಡುವುದಕ್ಕಾಗಿ ಚೀಟು ಹಾಕಿಕೊಳ್ಳೋಣ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಹೀಗೆ,
25 ಯೇಸುವಿನ ಶಿಲುಬೆಯ ಬಳಿಯಲ್ಲಿ ಅವರ ತಾಯಿಯೂ ಅವರ ತಾಯಿಯ ಸಹೋದರಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು. 26 ಯೇಸು ತಮ್ಮ ತಾಯಿಯೂ ತಾವು ಪ್ರೀತಿಸಿದ ಶಿಷ್ಯನೂ ಹತ್ತಿರದಲ್ಲಿ ನಿಂತಿರುವುದನ್ನು ಕಂಡು ತಮ್ಮ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು,” ಎಂದರು. 27 ಆಮೇಲೆ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿಯು,” ಎಂದರು. ಆ ಸಮಯದಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಇರಿಸಿಕೊಂಡನು.
31 ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು. 32 ಅದರಂತೆ ಸೈನಿಕರು ಬಂದು ಯೇಸುವಿನ ಜೊತೆಯಲ್ಲಿ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು. 33 ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಯೇಸು ಆಗಲೇ ಸತ್ತಿರುವುದನ್ನು ಕಂಡು ಅವರ ಕಾಲುಗಳನ್ನು ಮುರಿಯಲಿಲ್ಲ. 34 ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಯೇಸುವಿನ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಹೊರಗೆ ಬಂದವು. 35 ಇದನ್ನು ಕಣ್ಣಾರೆ ಕಂಡವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವಾದದ್ದು, ನೀವು ಸಹ ನಂಬುವಂತೆ ತಾನು ಹೇಳಿರುವುದು ಸತ್ಯವೆಂದು ಅವನು ಬಲ್ಲನು. 36 ಏಕೆಂದರೆ, “ಯೇಸುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು,”[d] ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆಯೇ ಇವೆಲ್ಲಾ ಸಂಭವಿಸಿದವು. 37 ಮತ್ತೊಂದು ಪವಿತ್ರ ವೇದದ ವಾಕ್ಯವು, “ತಾವು ಇರಿದವನನ್ನು ಅವರು ನೋಡುವರು,”[e] ಎಂದು ಹೇಳುತ್ತದೆ.