4 “ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ, 5 ಆದರೂ ಈ ವಿಧವೆಯು ನನಗೆ ತೊಂದರೆಕೊಟ್ಟು ಪದೇಪದೇ ನನ್ನ ಬಳಿಗೆ ಬಂದು, ನನ್ನನ್ನು ಕಾಡಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು,’ ” ಎಂದುಕೊಂಡನು.
6 ಅನಂತರ ಕರ್ತದೇವರು, “ಈ ಅನ್ಯಾಯಗಾರನಾದ ನ್ಯಾಯಾಧಿಪತಿಯು ಹೇಳಿಕೊಂಡಿದ್ದನ್ನು ಕೇಳಿರಿ. 7 ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ? 8 ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.
13 “ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.
14 “ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.
19 ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ. 20 ‘ವ್ಯಭಿಚಾರ ಮಾಡಬಾರದು, ನರಹತ್ಯೆ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’[a] ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.
21 ಅದಕ್ಕವನು, “ನನ್ನ ಬಾಲ್ಯದಿಂದಲೇ ನಾನು ಇವೆಲ್ಲವನ್ನೂ ಕೈಕೊಂಡಿದ್ದೇನೆ,” ಎಂದು ಹೇಳಿದನು.
22 ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
23 ಅವನು ಇದನ್ನು ಕೇಳಿ, ಬಹಳ ದುಃಖವುಳ್ಳವನಾದನು. ಏಕೆಂದರೆ ಅವನು ಬಹಳ ಸಿರಿವಂತನಾಗಿದ್ದನು. 24 ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ಕಂಡು, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ! 25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು.
26 ಇದನ್ನು ಕೇಳಿದವರು, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದರು.
27 ಅದಕ್ಕೆ ಯೇಸು, “ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ,” ಎಂದು ಹೇಳಿದರು.
28 ಆಗ ಪೇತ್ರನು, “ಇಗೋ, ನಾವು ಎಲ್ಲವನ್ನೂ ಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು.
29 ಯೇಸು ಅವರಿಗೆ, “ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಮನೆಯನ್ನಾದರೂ ಹೆಂಡತಿಯನ್ನಾದರೂ ಸಹೋದರರನ್ನಾದರೂ ತಂದೆತಾಯಿಗಳನ್ನಾದರೂ ಮಕ್ಕಳನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು, 30 ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಕಾಲದಲ್ಲಿ ನಿತ್ಯಜೀವವನ್ನೂ ಹೊಂದುವನು,” ಎಂದರು.
34 ಆದರೆ ಶಿಷ್ಯರಿಗೆ ಇವುಗಳಲ್ಲಿ ಒಂದೂ ಅರ್ಥವಾಗಲಿಲ್ಲ. ಈ ಮಾತುಗಳು ಅವರಿಗೆ ಮರೆಯಾಗಿದ್ದುದರಿಂದ, ಯೇಸು ಹೇಳಿದವುಗಳನ್ನು ಅವರು ತಿಳಿದುಕೊಳ್ಳಲಿಲ್ಲ.
38 ಆಗ ಅವನು, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸಿ!” ಎಂದು ಗಟ್ಟಿಯಾಗಿ ಕೂಗಿಕೊಂಡನು.
39 ಮುಂದೆ ಹೋಗುತ್ತಿದ್ದವರು ಸುಮ್ಮನಿರುವಂತೆ ಅವನನ್ನು ಗದರಿಸಿದರು, ಆದರೂ ಅವನು, “ದಾವೀದನ ಪುತ್ರರೇ, ನನ್ನನ್ನು ಕರುಣಿಸಿ,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
40 ಆಗ ಯೇಸು ನಿಂತು ಅವನನ್ನು ತಮ್ಮ ಬಳಿಗೆ ಕರೆತರುವಂತೆ ಅಪ್ಪಣೆಕೊಟ್ಟರು. ಅವನು ಯೇಸುವಿನ ಬಳಿಗೆ ಬಂದಾಗ, ಅವರು ಅವನಿಗೆ, 41 “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಿದರು.
42 ಆಗ ಯೇಸು ಅವನಿಗೆ, “ನೀನು ದೃಷ್ಟಿ ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. 43 ಕೂಡಲೇ ಅವನು ದೃಷ್ಟಿಯನ್ನು ಪಡೆದನು. ಆಗ ಅವನು ದೇವರನ್ನು ಸ್ತುತಿಸುತ್ತಾ, ಯೇಸುವನ್ನು ಹಿಂಬಾಲಿಸಿದನು. ಎಲ್ಲಾ ಜನರು ಅದನ್ನು ಕಂಡು, ದೇವರಿಗೆ ಸ್ತೋತ್ರ ಸಲ್ಲಿಸಿದರು.
<- ಲೂಕ 17ಲೂಕ 19 ->- a ವಿಮೋ 20:12-16; ಧರ್ಮೋ 5:16-20