5 ಯೇಸು ಆ ಸ್ಥಳಕ್ಕೆ ಬಂದು, ಮೇಲಕ್ಕೆ ನೋಡಿ ಅವನಿಗೆ, “ಜಕ್ಕಾಯನೇ, ತಕ್ಷಣವೇ ಇಳಿದು ಬಾ. ನಾನು ಇಂದು ನಿನ್ನ ಮನೆಯಲ್ಲಿ ತಂಗಬೇಕು,” ಎಂದರು. 6 ಜಕ್ಕಾಯನು ತಕ್ಷಣವೇ ಇಳಿದುಬಂದು ಅವರನ್ನು ಸಂತೋಷದಿಂದ ಬರಮಾಡಿಕೊಂಡನು.
7 ಇದನ್ನು ಕಂಡವರೆಲ್ಲರೂ, “ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ,” ಎಂದು ಗೊಣಗುಟ್ಟಿದರು.
8 ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.
9 ಯೇಸು ಅವನಿಗೆ, “ಈ ದಿನವೇ ಈ ಮನೆಗೆ ರಕ್ಷಣೆ ಬಂದಿದೆ. ಏಕೆಂದರೆ ಇವನು ಸಹ ಅಬ್ರಹಾಮನ ಪುತ್ರನಲ್ಲವೇ? 10 ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.
14 “ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.
15 “ಆದರೂ ಅವನು ತನ್ನ ರಾಜ್ಯವನ್ನು ಪಡೆದು ಹಿಂದಿರುಗಿದಾಗ, ವ್ಯಾಪಾರದಿಂದ ಇನ್ನೂ ಎಷ್ಟು ಲಾಭಗಳಿಸಿದರೆಂದು ತಿಳಿದುಕೊಳ್ಳುವಂತೆ, ತಾನು ಹಣ ಕೊಟ್ಟ ಆ ಕೆಲಸಗಾರರನ್ನು ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದನು.
16 “ಆಗ ಮೊದಲನೆಯವನು ಬಂದು, ‘ಸ್ವಾಮಿ, ನಿಮ್ಮ ಒಂದು ನಾಣ್ಯದಿಂದ ಇನ್ನೂ ಹತ್ತು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.
17 “ಅದಕ್ಕೆ ಅವನು, ‘ಚೆನ್ನಾಗಿ ಮಾಡಿದಿ, ಒಳ್ಳೆಯ ಸೇವಕನೇ. ನೀನು ಅತ್ಯಂತ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ, ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು,’ ಎಂದನು.
18 “ಎರಡನೆಯವನು ಬಂದು, ‘ಸ್ವಾಮಿ, ನಿನ್ನ ಒಂದು ನಾಣ್ಯದಿಂದ ಇನ್ನೂ ಐದು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.
19 “ಅದಕ್ಕೆ ಅವನು, ‘ನೀನು ಐದು ಪಟ್ಟಣಗಳ ಮೇಲೆ ಅಧಿಕಾರಿಯಾಗಿರು,’ ಎಂದು ಅವನಿಗೆ ಹೇಳಿದನು.
20 “ಆಗ ಮತ್ತೊಬ್ಬನು ಬಂದು, ‘ಸ್ವಾಮಿ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿಟ್ಟಿದ್ದ ನಿಮ್ಮ ನಾಣ್ಯ ಇದೇ. 21 ನೀವು ಕಠಿಣ ಮನುಷ್ಯರೆಂದು ನಾನು ನಿಮಗೆ ಭಯಪಟ್ಟೆನು. ನೀನು ಕೂಡಿಡದಿರುವುದನ್ನು ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ,’ ಎಂದನು.
22 “ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ. 23 ಹಾಗಿದ್ದರೆ ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ[b] ಏಕೆ ಹಾಕಲಿಲ್ಲ, ನಾನು ಹಿಂದಿರುಗಿದಾಗ ಹಣವನ್ನು ಬಡ್ಡಿ ಸಮೇತವಾಗಿ ತೆಗೆದುಕೊಳ್ಳುತ್ತಿದ್ದೆನು,’ ಎಂದು ಹೇಳಿದನು.
24 “ಯಜಮಾನನು ಹತ್ತಿರ ನಿಂತಿದ್ದವರಿಗೆ, ‘ಇವನಿಂದ ಆ ನಾಣ್ಯವನ್ನು ತೆಗೆದುಕೊಂಡು ಹತ್ತು ನಾಣ್ಯಗಳಿದ್ದವನಿಗೆ ಕೊಡಿರಿ,’ ಎಂದನು.
25 “ಆಗ ಅವರು, ‘ಸ್ವಾಮಿ, ಅವನಿಗೆ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ!’ ಎಂದರು.
26 “ಆಗ ಯಜಮಾನನು, ‘ಇದ್ದ ಪ್ರತಿಯೊಬ್ಬರಿಗೆ ಕೊಡಲಾಗುವುದು ಮತ್ತು ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ಕಸಿದುಕೊಳ್ಳಲಾಗುವುದು. 27 ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”
32 ಆ ಶಿಷ್ಯರಿಬ್ಬರೂ ತಮ್ಮ ಮಾರ್ಗವಾಗಿ ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡರು. 33 ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ, ಅದರ ಯಜಮಾನರು ಅವರಿಗೆ, “ನೀವು ಕತ್ತೆಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಕೇಳಿದ್ದಕ್ಕೆ,
34 ಅವರು, “ಇದು ಕರ್ತದೇವರಿಗೆ ಬೇಕಾಗಿದೆ,” ಎಂದರು.
35 ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಬಟ್ಟೆಗಳನ್ನು ಕತ್ತೆಮರಿಯ ಮೇಲೆ ಹಾಕಿ, ಅದರ ಮೇಲೆ ಯೇಸುವನ್ನು ಕೂರಿಸಿದರು. 36 ಯೇಸು ಹೋಗುತ್ತಿರುವಾಗ, ಜನರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
37 ಇದಲ್ಲದೆ ಯೇಸು ಓಲಿವ್ ಗುಡ್ಡದಿಂದ ಇಳಿಜಾರನ್ನು ಸಮೀಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ಕಂಡ ಎಲ್ಲ ಮಹತ್ಕಾರ್ಯಗಳಿಗಾಗಿ ಸಂತೋಷಪಡುತ್ತಾ, ಮಹಾ ಸ್ವರದಿಂದ ದೇವರನ್ನು ಹೀಗೆ ಕೊಂಡಾಡಲಾರಂಭಿಸಿದರು:
39 ಜನಸಮೂಹದಲ್ಲಿದ್ದ ಕೆಲವು ಫರಿಸಾಯರು ಯೇಸುವಿಗೆ, “ಬೋಧಕರೇ, ನಿಮ್ಮ ಶಿಷ್ಯರನ್ನು ಗದರಿಸಿ!” ಎಂದರು.
40 ಆಗ ಯೇಸು ಅವರಿಗೆ, “ಇವರು ಸುಮ್ಮನಾದರೆ, ಈ ಕಲ್ಲುಗಳು ಕೂಗುವವು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
41 ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು, 42 “ನೀನು ಇಂದಾದರೂ ನಿನ್ನ ಸಮಾಧಾನದ ವಿಷಯಗಳನ್ನು ಅರಿತುಕೊಂಡಿದ್ದರೆ, ಚೆನ್ನಾಗಿತ್ತು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ. 43 ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು. 44 ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.
47 ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು. 48 ಜನರೆಲ್ಲರೂ ಯೇಸು ಹೇಳುವ ಒಂದೊಂದು ಮಾತಿಗೂ ಬಹಳ ಲಕ್ಷ್ಯಕೊಟ್ಟು ಯೇಸುವಿನ ಉಪದೇಶವನ್ನು ಕೇಳುತ್ತಿದ್ದುದರಿಂದ, ಅವರಿಗೆ ಏನು ಮಾಡಬೇಕೋ ತೋಚಲಿಲ್ಲ.
<- ಲೂಕ 18ಲೂಕ 20 ->