4 ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ, ತನ್ನ ಸಂಬಂಧಿಕರ ನಡುವೆ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು. 5 ಅಲ್ಲಿ ಯೇಸು ಕೆಲವು ರೋಗಿಗಳ ಮೇಲೆ ಕೈಗಳನ್ನಿಟ್ಟು ಅವರನ್ನು ಗುಣಪಡಿಸಿದ್ದಲ್ಲದೆ ಬೇರೆ ಯಾವ ಅದ್ಭುತಗಳನ್ನೂ ಮಾಡಲಿಲ್ಲ. 6 ಯೇಸು ಅವರ ಅಪನಂಬಿಕೆಯನ್ನು ಕಂಡು ಆಶ್ಚರ್ಯಪಟ್ಟರು.
8 ಯೇಸು ಅವರಿಗೆ, “ಪ್ರಯಾಣಕ್ಕಾಗಿ ಕೇವಲ ಕೋಲು ಒಂದನ್ನು ಬಿಟ್ಟು, ರೊಟ್ಟಿ, ಚೀಲ ಅಥವಾ ಜೇಬಿನಲ್ಲಿ ಹಣವನ್ನು ತೆಗೆದುಕೊಳ್ಳಬೇಡಿರಿ. 9 ಪಾದರಕ್ಷೆಗಳನ್ನು ಮೆಟ್ಟಿಕೊಳ್ಳಿರಿ. ಆದರೆ ಹೆಚ್ಚು ಅಂಗಿಗಳನ್ನು ತೆಗೆದುಕೊಳ್ಳಬೇಡಿರಿ,” ಎಂದು ಆಜ್ಞಾಪಿಸಿದರು. 10 ಇದಲ್ಲದೆ ಯೇಸು ಅವರಿಗೆ, “ನೀವು ಯಾವುದಾದರೊಂದು ಮನೆಗೆ ಹೋದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ. 11 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಅಥವಾ ನಿಮ್ಮ ಮಾತುಗಳನ್ನು ಕೇಳದಿದ್ದರೆ, ನೀವು ಹೊರಡುತ್ತಿರುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.
12 ಶಿಷ್ಯರು ಹೊರಟುಹೋಗಿ ಜನರಿಗೆ ದೇವರ ಕಡೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳಿದರು. 13 ಅವರು ಅನೇಕರಿಂದ ದೆವ್ವಗಳನ್ನೋಡಿಸಿ, ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಗುಣಪಡಿಸಿದರು.
15 ಇನ್ನು ಕೆಲವರು, “ಈತನು ಎಲೀಯನು,” ಎಂದರು.
16 ಆದರೆ ಹೆರೋದನು ಇದನ್ನು ಕೇಳಿ, “ನಾನು ಶಿರಚ್ಛೇದನ ಮಾಡಿದ ಯೋಹಾನನೇ, ತಿರುಗಿ ಜೀವಂತವಾಗಿ ಬಂದಿದ್ದಾನೆ,” ಎಂದು ಹೇಳಿದನು.
17 ಏಕೆಂದರೆ, ಯೋಹಾನನನ್ನು ಬಂಧಿಸಿ ಸೆರೆಮನೆಗೆ ಹಾಕಬೇಕೆಂದು ಹೆರೋದನು ತಾನೇ ಕಳುಹಿಸಿದ್ದನು. ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆ ಮಾಡಿಕೊಂಡದ್ದರಿಂದ ಅವನು ಹೀಗೆ ಮಾಡಿದ್ದನು. 18 ಏಕೆಂದರೆ ಯೋಹಾನನು ಹೆರೋದನಿಗೆ, “ನೀನು ನಿನ್ನ ಸಹೋದರನ ಹೆಂಡತಿಯನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಹೇಳುತ್ತಿದ್ದನು. 19 ಇದರಿಂದ ಹೆರೋದ್ಯಳು ಯೋಹಾನನ ಮೇಲೆ ಹಗೆಯಿಟ್ಟುಕೊಂಡು, ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ. 20 ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.
21 ಕೊನೆಗೆ ಅನುಕೂಲವಾದ ಸಮಯ ಸಿಕ್ಕಿತು. ತನ್ನ ಜನ್ಮ ದಿನದಂದು ಹೆರೋದನು ತನ್ನ ಉನ್ನತ ಅಧಿಕಾರಿಗಳಿಗೆ, ಸೇನಾಧಿಪತಿಗಳಿಗೆ ಹಾಗೂ ಗಲಿಲಾಯದ ಪ್ರಮುಖರಿಗೆ ಔತಣವನ್ನು ಏರ್ಪಡಿಸಿದನು. 22 ಹೆರೋದ್ಯಳ ಮಗಳು ಒಳಗೆ ಬಂದು ನೃತ್ಯ ಮಾಡಿ, ಹೆರೋದನನ್ನೂ ಊಟಕ್ಕೆ ಬಂದ ಅವನ ಅತಿಥಿಗಳನ್ನೂ ಸಂತೋಷಪಡಿಸಿದಳು.
24 ಆಕೆ ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನನ್ನು ಕೇಳಲಿ?” ಎಂದು ಕೇಳಲು, ಆಕೆಯು,
25 ಕೂಡಲೇ ಆ ಹುಡುಗಿ ಅವಸರವಾಗಿ ರಾಜನ ಮುಂದೆ ಬಂದು, “ನನಗೆ ಈಗಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿ ಕೊಡಬೇಕು,” ಎಂದು ಕೇಳಿಕೊಂಡಳು.
26 ಇದರಿಂದ ಅರಸನಿಗೆ ಬಹಳ ದುಃಖವಾದರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಆಕೆಯ ಕೋರಿಕೆಯನ್ನು ನಿರಾಕರಿಸಲಿಲ್ಲ. 27 ಕೂಡಲೇ ಅರಸನು ಯೋಹಾನನ ತಲೆಯನ್ನು ತರಬೇಕೆಂದು ಒಬ್ಬ ಕಾವಲುಗಾರನಿಗೆ ಅಪ್ಪಣೆಕೊಟ್ಟು ಕಳುಹಿಸಿದನು. ಅವನು ಹೋಗಿ ಸೆರೆಮನೆಯಲ್ಲಿದ್ದ ಯೋಹಾನನ ಶಿರಚ್ಛೇದನ ಮಾಡಿದನು. 28 ಅವನ ತಲೆಯನ್ನು ತಟ್ಟೆಯಲ್ಲಿಟ್ಟುಕೊಂಡು ಬಂದು ಅದನ್ನು ಆ ಹುಡುಗಿಗೆ ಕೊಟ್ಟನು. ಆಕೆಯು ಅದನ್ನು ತನ್ನ ತಾಯಿಗೆ ಕೊಟ್ಟಳು. 29 ಇದನ್ನು ಕೇಳಿ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಯಲ್ಲಿ ಇಟ್ಟರು.
32 ಆಗ ಅವರು ದೋಣಿಯಲ್ಲಿ ಏಕಾಂತ ಸ್ಥಳಕ್ಕೆ ಹೋದರು. 33 ಆದರೆ ಅವರು ಹೋಗುವುದನ್ನು ಕಂಡ ಅನೇಕರು ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ಓಡಿ ಅವರಿಗಿಂತ ಮುಂಚೆ ಅಲ್ಲಿ ಸೇರಿದ್ದರು. 34 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು.
35 ಅಷ್ಟರೊಳಗೆ ಸಂಜೆಯಾಯಿತು. ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಲೇ ಹೊತ್ತು ಮೀರಿದೆ, 36 ಈ ಜನರು ಸುತ್ತಮುತ್ತಲಿನ ಹಳ್ಳಿಗಳಿಗೆ ಹೋಗಿ ತಿನ್ನುವುದಕ್ಕಾಗಿ ಏನಾದರೂ ಕೊಂಡುಕೊಳ್ಳುವಂತೆ ಇವರನ್ನು ಕಳುಹಿಸಿಬಿಡು,” ಎಂದು ಹೇಳಿದರು.
37 ಆದರೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು.
38 ಯೇಸು ಅವರಿಗೆ, “ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ,” ಎಂದು ಕೇಳಿದರು.
39 ಆಮೇಲೆ ಯೇಸು ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳುವಂತೆ ಜನರಿಗೆ ಆಜ್ಞಾಪಿಸಿದರು. 40 ಅವರು ನೂರರಂತೆ, ಐವತ್ತರಂತೆ ಸಾಲಾಗಿ ಕುಳಿತರು. 41 ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ರೊಟ್ಟಿಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅದರಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚಿಸಿದರು. 42 ಅವರೆಲ್ಲರೂ ತಿಂದು ತೃಪ್ತರಾದರು. 43 ಶಿಷ್ಯರು ಉಳಿದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು. 44 ಊಟಮಾಡಿದವರಲ್ಲಿ ಐದು ಸಾವಿರ ಮಂದಿ ಗಂಡಸರಿದ್ದರು.
47 ಸಂಜೆಯಾದಾಗ, ದೋಣಿಯು ಸರೋವರದ ಮಧ್ಯದಲ್ಲಿತ್ತು. ಯೇಸು ದಡದಲ್ಲಿ ಒಬ್ಬರೇ ಇದ್ದರು. 48 ಎದುರುಗಾಳಿ ಬಲವಾಗಿ ಬೀಸುತ್ತಿದ್ದುದರಿಂದ ಶಿಷ್ಯರು ದೋಣಿಯನ್ನು ನಿಯಂತ್ರಿಸಲು ದಣಿದು ಹೋದದ್ದನ್ನು ಯೇಸು ಕಂಡು, ಮುಂಜಾನೆ ಸುಮಾರು ಮೂರು ಗಂಟೆಯಲ್ಲಿ ಅವರ ಬಳಿಗೆ ಸರೋವರದ ಮೇಲೆ ನಡೆಯುತ್ತಾ ಬಂದರು. ಯೇಸು ಅವರನ್ನು ದಾಟಿ ಹೋಗುವುದರಲ್ಲಿದ್ದರು. 49 ಆದರೆ ಯೇಸು ಸರೋವರದ ಮೇಲೆ ನಡೆಯುವುದನ್ನು ಕಂಡಾಗ, ಅವರು ಯೇಸುವನ್ನು ಭೂತವೆಂದು ಭಾವಿಸಿ, ಕಿರುಚಿದರು. 50 ಅವರೆಲ್ಲರೂ ಯೇಸುವನ್ನು ಕಂಡು ದಿಗಿಲುಗೊಂಡಿದ್ದರು.
53 ಅವರು ಸರೋವರವನ್ನು ದಾಟಿ, ಗೆನೆಜರೇತ್ ಸೀಮೆಯ ದಡ ಸೇರಿದರು. 54 ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದರು. 55 ಅವರು ಆ ಪ್ರದೇಶದಲ್ಲೆಲ್ಲಾ ಓಡಾಡಿ, ಕಾಯಿಲೆಯಾಗಿದ್ದವರನ್ನು ಚಾಪೆಗಳ ಮೇಲೆ ಹಾಕಿಕೊಂಡು ಯೇಸು ಎಲ್ಲಿದ್ದಾರೆಂದು ಕೇಳಿದರೋ ಅಲ್ಲಿಗೆ ಬರಲಾರಂಭಿಸಿದರು. 56 ಯೇಸು ಹಳ್ಳಿ, ಪಟ್ಟಣ ಊರುಗಳಲ್ಲಿ ಎಲ್ಲೆಲ್ಲಿ ಹೋದರೋ ಅಲ್ಲಿ ಜನರು ರೋಗಿಗಳನ್ನು ತಂದು ಪೇಟೆಗಳಲ್ಲಿ ಇಟ್ಟು, ಯೇಸುವಿನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
<- ಮಾರ್ಕ 5ಮಾರ್ಕ 7 ->- a ಗ್ರೀಕ್ ಭಾಷೆಯಲ್ಲಿ ಇನ್ನೂರು ದಿನಾರ್. ಇದು ಒಬ್ಬ ಕೂಲಿಯವನ ಅರ್ಧವರ್ಷದ ಕೂಲಿಯಾಗಿತ್ತು.