5 ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!” ಎಂದರು ಮತ್ತು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!” ಎಂದು ಹೇಳಿದನು.
6 ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ[c] ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು. 7 ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು. 8 ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.
15 ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆಗೋಲನ್ನು ಹಿಡಿದಿದ್ದನು. 16 ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು, ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು 2,200 ಕಿಲೋಮೀಟರ್ ಆಗಿತ್ತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿದ್ದವು. 17 ಅವನು ಅದರ ಗೋಡೆಯನ್ನೂ ಅಳತೆ ಮಾಡಿದನು. ಅದು 65 ಮೀಟರ್ ಆಗಿತ್ತು. ಮನುಷ್ಯನ ಅಳತೆಯಂತೆ ದೇವದೂತನು ಅಳೆದನು. 18 ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲಾಗಿತ್ತು. ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. 19 ಪಟ್ಟಣದ ಗೋಡೆಯು ಮತ್ತು ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತ, ಎರಡನೆಯದು ವೈಡೂರ್ಯ, ಮೂರನೆಯದು ಪಚ್ಚೆ, ನಾಲ್ಕನೆಯದು ಪದ್ಮರಾಗ, 20 ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಬತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲ ಸ್ಪಟಿಕ. 21 ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದಾಗಿತ್ತು. ಪಟ್ಟಣದ ಮಹಾ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
22 ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ. 23 ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು. 24 ಅದರ ಬೆಳಕಿನಲ್ಲಿ ಎಲ್ಲಾ ಜನರು ನಡೆಯುವರು. ಭೂರಾಜರು ತಮ್ಮ ಮಹಿಮೆಯನ್ನು ಅಲ್ಲಿಗೆ ತರುವರು. 25 ಅದರ ಹೆಬ್ಬಾಗಿಲುಗಳು ಒಂದು ದಿನವೂ ಮುಚ್ಚುವುದೇ ಇಲ್ಲ. ಇರುಳಂತೂ ಇರುವುದೇ ಇಲ್ಲ. 26 ಜನಾಂಗಗಳ ಮಹಿಮೆಯೂ ಗೌರವವೂ ಅಲ್ಲಿಗೆ ತರಲಾಗುವವು. 27 ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.
<- ಪ್ರಕಟನೆ 20ಪ್ರಕಟನೆ 22 ->